Salary Hike: ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್; ವೇತನ ಬಡ್ತಿ, ಮುಂಬಡ್ತಿ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

By: ವಿಜಯಲಕ್ಷ್ಮೀ ಪೂಜಾರಿ

On: Thursday, September 4, 2025 8:19 PM

salary-hike-promotion-for-school-teachers
Google News
Follow Us
Telegram Group Join Now
WhatsApp Group Join Now

ಬೆಂಗಳೂರು: ರಾಜ್ಯ ಸರ್ಕಾರವು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವಾರು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ವೇತನ ಬಡ್ತಿ (Salary Hike) ನೀಡುವುದರೊಂದಿಗೆ, ರೈತರು ಮತ್ತು ಕನ್ನಡಪರ ಹೋರಾಟಗಾರರ ವಿರುದ್ಧ ದಾಖಲಾದ ಪ್ರಕರಣಗಳನ್ನು ವಾಪಸ್ ಪಡೆಯುವ ನಿರ್ಧಾರಕ್ಕೂ ಒಪ್ಪಿಗೆ ದೊರೆತಿದೆ.

Salary Hike- ಶಿಕ್ಷಕರಿಗೆ ವೇತನ ಬಡ್ತಿ:

ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪದವಿ ಹಾಗೂ TET ಪ್ರಮಾಣಪತ್ರ ಹೊಂದಿರುವ ಶಿಕ್ಷಕರಿಗೆ ಒಂದು ಬಾರಿಯ ವೇತನ ಬಡ್ತಿ ನೀಡಲು ಸರ್ಕಾರ ತೀರ್ಮಾನಿಸಿದೆ. ಇದರಿಂದಾಗಿ ಅವರು 6 ಮತ್ತು 7ನೇ ತರಗತಿಗಳಿಗೆ ಬೋಧನೆ ಮಾಡುವ ಅವಕಾಶ ಪಡೆದುಕೊಳ್ಳಲಿದ್ದಾರೆ. ಜೊತೆಗೆ ಮುಖ್ಯ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡಲು ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡುವುದಕ್ಕೂ ಅನುಮೋದನೆ ನೀಡಲಾಗಿದೆ.

ರೈತರ-ಕನ್ನಡಪರ ಹೋರಾಟಗಾರರ ಪ್ರಕರಣ ವಾಪಸ್:

ರಾಜ್ಯದ ರೈತರು ಮತ್ತು ಕನ್ನಡಪರ ಹೋರಾಟಗಾರರ ವಿರುದ್ಧ ದಾಖಲಾದ 60 ಪ್ರಕರಣಗಳನ್ನು ವಾಪಸ್ ಪಡೆಯಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ಮೆಟ್ರೋ ಎಲಿವೇಟೆಡ್ ಕಾರಿಡಾರ್:

ಮೆಟ್ರೋ ಹಂತ-3ರ ಭಾಗವಾಗಿ ಜೆಪಿನಗರ 4ನೇ ಹಂತದಿಂದ ಹೆಬ್ಬಾಳದವರೆಗೆ, ಹೊಸಹಳ್ಳಿಯಿಂದ ಮಾಗಡಿ ರಸ್ತೆ ಮಾರ್ಗವಾಗಿ ಕಡಬಗೆರೆವರೆಗೆ 37.121 ಕಿ.ಮೀ ಉದ್ದದ ಡಬಲ್ ಡೆಕ್ಕರ್ ಎಲಿವೇಟೆಡ್ ಕಾರಿಡಾರ್ ನಿರ್ಮಾಣಕ್ಕೆ ಕ್ಯಾಬಿನೆಟ್ ಅನುಮೋದನೆ ನೀಡಿದೆ.

ಕೃಷಿ ಉತ್ಪನ್ನ ಮಾರುಕಟ್ಟೆ ಶುಲ್ಕ ಬದಲಾವಣೆ:

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಶುಲ್ಕವನ್ನು 41 ಪೈಸೆಯಿಂದ 42 ಪೈಸೆಗೆ ಹೆಚ್ಚಿಸುವ ತೀರ್ಮಾನ ಕೈಗೊಳ್ಳಲಾಗಿದೆ. ವಹಿವಾಟು ವೆಚ್ಚವನ್ನು 0.01 ಪೈಸೆಯಿಂದ ಹೆಚ್ಚಿಸಿ ಪರಿಷ್ಕರಿಸಲಾಗಿದೆ.

ಆಶಾಕಿರಣ ಯೋಜನೆ:

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಆಶಾಕಿರಣ ಯೋಜನೆ ಅನುಷ್ಠಾನಗೊಳ್ಳಲಿದೆ. 52.85 ಕೋಟಿ ರೂ. ಅನುದಾನ ನೀಡಲಾಗಿದ್ದು, ಕಣ್ಣಿನ ಉಚಿತ ತಪಾಸಣೆ ಹಾಗೂ ಅಂಧತ್ವ ನಿವಾರಣಾ ಕಾರ್ಯಕ್ರಮವನ್ನು ಒಳಗೊಂಡಿರುವ ಈ ಯೋಜನೆ ರಾಜ್ಯಾದ್ಯಂತ ಜಾರಿಯಾಗಲಿದೆ.

ಹೊಸ ಮೆಡಿಕಲ್ ಕಾಲೇಜು:

ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ರಾಯಸಂದ್ರ ಗ್ರಾಮದಲ್ಲಿ ಹೊಸ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಈ ಕಾಲೇಜಿಗೆ 65 ಕೋಟಿ ರೂ. ಮೊತ್ತದಲ್ಲಿ 25 ಎಕರೆ ಜಮೀನು ಖರೀದಿಸಲು ಕರ್ನಾಟಕ ಗೃಹ ಮಂಡಳಿಯಿಂದ ಆಡಳಿತಾತ್ಮಕ ಅನುಮೋದನೆ ದೊರೆತಿದೆ.

ಒಟ್ಟಾರೆಯಾಗಿ, ಶಿಕ್ಷಕರಿಗೆ ಬಡ್ತಿ ನೀಡುವುದು, ರೈತರ-ಹೋರಾಟಗಾರರ ಪ್ರಕರಣ ವಾಪಸ್, ಮೆಟ್ರೋ ಮತ್ತು ವೈದ್ಯಕೀಯ ಮೂಲಸೌಕರ್ಯಗಳಿಗೆ ಅನುಮೋದನೆ ಸೇರಿದಂತೆ ಹಲವು ನಿರ್ಧಾರಗಳು ರಾಜ್ಯದ ಶಿಕ್ಷಣ, ಸಾರಿಗೆ, ಆರೋಗ್ಯ ಹಾಗೂ ಕೃಷಿ ಕ್ಷೇತ್ರಗಳಿಗೆ ಮಹತ್ವದ ಬದಲಾವಣೆಗಳನ್ನು ತರುತ್ತವೆ.

ಕೃಷಿ ಭಾಗ್ಯ ಯೋಜನೆ 2025-26: ರೈತರಿಂದ ಅರ್ಜಿ ಆಹ್ವಾನ

GST News: ಜಿಎಸ್‌ಟಿ ದರ ಇಳಿಕೆ

Telegram Group Join Now
WhatsApp Group Join Now

Leave a Comment